ಜಪ್ಪಿನಮೊಗರು ಜಯ- ವಿಜಯ ಜೋಡುಕರೆ ಕಂಬಳ

Update: 2019-02-09 14:09 GMT

ಮಂಗಳೂರು, ಫೆ.9: ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 7ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳೋತ್ಸ ಇಂದು ಬೆಳಗ್ಗೆ ಆರಂಭಗೊಂಡಿತು.

ಕನೆಹಲಗೆ, ಅಡ್ಡ ಹಲಗೆ, ಹಗ್ಗ ವಿಭಾಗ, ನೇಗಿಲು ವಿಭಾಗ ಸೇರಿದಂತೆ ಒಟ್ಟು 7 ವಿಭಾಗದಲ್ಲಿ 110ಜತೆ ಕೋಣಗಳು ಸ್ಪರ್ಧೆ ನಡೆಯಿತು. ಬೆಳಗ್ಗೆ 7.30ಕ್ಕೆ ಧಾರ್ಮಿಕ ವಿಧಾನಗಳು ಆರಂಭಗೊಂಡು ದೇರೆಬೈಲು ಬ್ರಹ್ಮಶ್ರೀ ವಿಠಲದಾಸ್ ತಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕರಾವಳಿ ಕಾಲೇಜು ಸಮೂಹ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ, ಬಂಟರ ಯಾನೆ ನಾಡವರ ಮಾತೃಸಂಘದ ಮಾಜಿ ಕಾರ್ಯದರ್ಶಿ ಸುಂದರ ಶೆಟ್ಟಿ, ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಗರೋಡಿ, ನೀಲಕಂಠ ಉಮಾಮಹೇಶ್ವರ ದೇವಳದ ಆಡಳಿತ ಮೊಕ್ತೇಸರ ಮಂಜುನಾಥ ಭಂಡಾರಿ, ವುಡ್‌ಲ್ಯಾಂಡ್ ಹೊಟೇಲ್ ಮಾಲೀಕ ಗಣೇಶ್ ಶೆಟ್ಟಿ, ಹರಿಯಪ್ಪ ಶೆಟ್ಟಿ, ಭುಜಂಗ ಶೆಟ್ಟಿ, ಕಾರ್ಪೊರೇಟರ್‌ಗಳಾದ ಪ್ರವೀಣ್‌ಚಂದ್ರ ಆಳ್ವ, ಸುರೇಂದ್ರ ಜೆ., ರಾಮಕೃಷ್ಣ ಶೆಟ್ಟಿ ಕಡೆಕಾರ್, ಉದಯಚಂದ್ರ ರೈ, ಮೋಹನ್‌ದಾಸ್ ಕಿಲ್ಲೆ, ಎನ್. ರವಿರಾಜ್ ಶೆಟ್ಟಿ, ಕಿರಣ್ ರೈ ಬಜಾಲ್, ಗಣೇಶ್ ಶೆಟ್ಟಿ ಕಂರ್ಬುಕೆರೆ, ಜಯಂತ್ ಜೆ. ಕೋಟ್ಯಾನ್, ಜೆ. ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ಕೆ. ಅನಿಲ್ ಶೆಟ್ಟಿ ಮನ್ಕುತೋಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಚಾರ ಸಮಿತಿ ಸಂಚಾಲಕ ಜೆ. ಸೀತಾರಾಮ ಶೆಟ್ಟಿ ಸ್ವಾಗತಿಸಿ, ಜೆ. ಶ್ರೀಧರ್‌ರಾಜ್ ಶೆಟ್ಟಿ, ಕರುಣಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಸುಭಾಷ್ ವಿ. ಅಡಪ ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಅತಿಕಾರಿ ಧನ್ಯವಾದ ಅರ್ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News