ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-02-09 16:06 GMT

ಕುಂದಾಪುರ, ಫೆ.9: ಅನಾರೋಗ್ಯದಿಂದ ಬಳಲುತ್ತಿದ್ದ ಬೀಜಾಡಿ ಗ್ರಾಮದ ಹೊದ್ರಾಳಿ ನಿವಾಸಿ ಲಕ್ಷ್ಮೀ(60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.8ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಳವಾರ: ವೈಯಕ್ತಿಕ ಕಾರಣದಿಂದ ಮನನೊಂದು ಫೆ.8ರಂದು ಸಂಜೆ ವೇಳೆ ಮನೆಯಲ್ಲಿ ವಿಷ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕಾಳಾವರ ಗ್ರಾಮದ ಸಲ್ವಾಡಿಯ ಮನೋಹರ್ ಮಾಬೆನ್ ಎಂಬವರ ಪತ್ನಿ ಪ್ರೇಮಾ ಮಾಬೆನ್ (54) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News