ಲೋಕಸಭೆ ಚುನಾವಣೆ : ಫೆಬ್ರವರಿ ಅಂತ್ಯದೊಳಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಅಂತಿಮ
ಹೈದರಾಬಾದ್, ಫೆ.10: ಶನಿವಾರ ದಿಲ್ಲಿಯಲ್ಲಿ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಸಭೆ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರವರಿ ಅಂತ್ಯದೊಳಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರೈತರು, ಉದ್ಯೋಗ, ಮಹಿಳಾ ಮೀಸಲಾತಿ ಮಸೂದೆ ಹಾಗೂ ಅಗತ್ಯ ವಸ್ತುಗಳ ಕುರಿತು ಆದ್ಯತೆ ನೀಡಲಾಗುವುದು ಎಂದು ಇದೇ ವೇಳೆ ರಾಹುಲ್ ತಿಳಿಸಿದ್ದಾರೆ.
ರಫೇಲ್ ಪ್ರಕರಣ, ನೋಟು ರದ್ದತಿಯಿಂದ ಆದ ಅನಾನುಕೂಲಗಳ ವಿಷಯವನ್ನೂ ಪ್ರಚಾರಕಾರ್ಯದಲ್ಲಿ ಬಳಸುವಂತೆ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷರು ಸಲಹೆ ನೀಡಿದರು. ಚುನಾವಣಾ ಸಮಿತಿಗಳನ್ನು ರಚಿಸುವುದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವುದು ಮುಂತಾದ ಕೆಲಸಗಳನ್ನು ಶೀಘ್ರ ನಡೆಸಿ ಫೆಬ್ರವರಿ 20ರೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್. ಉತ್ತಮ್ ಕುಮಾರ್ ಹೇಳಿದ್ದಾರೆ.