ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-02-10 16:32 GMT

ಕಾರ್ಕಳ, ಫೆ.10: ಅನಾರೋಗ್ಯದಿಂದ ಬಳಲುತ್ತಿದ್ದ ಪಳ್ಳಿ ಗ್ರಾಮದ ಕಂಬಳ ಕೋಡಿ ನಿವಾಸಿ ಸುಂದರ ಶೆಟ್ಟಿ(72) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ. 9ರಂದು ಸಂಜೆ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಅಂಗಡಿ ವ್ಯಾಪಾರದಲ್ಲಿ ಉಂಟಾದ ಆರ್ಥಿಕ ತೊಂದರೆಯಿಂದ ಮಾನಸಿಕವಾಗಿ ನೊಂದ ಕಟಪಾಡಿ ಕೆವಿಎಸ್‌ಎಂ ಕಾಲೇಜು ಎದುರಿನ ನಿವಾಸಿ ನಾಗೇಶ್ ಜೋಗಿ (60) ಎಂಬವರು ಫೆ.9ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News