×
Ad

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಲೇಖನ ಸ್ಪರ್ಧೆ

Update: 2019-02-10 22:04 IST

ಬೆಂಗಳೂರು, ಫೆ.10: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರ ಸಲುವಾಗಿ ‘ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕರಾಪ ಗೌರವ ಕಾರ್ಯದರ್ಶಿ ಗಿರೀಶ್ ಕಡ್ಲೇವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು 1000 ಪದಗಳು ಮೀರದಂತೆ ಕಡ್ಡಾಯವಾಗಿ ಕನ್ನಡದಲ್ಲಿ ಲೇಖನ ಬರೆದು ಕಳುಹಿಸಬೇಕು. ಸ್ಪರ್ಧೆಯಲ್ಲಿ ಭಾಗಹಿಸುವವರು ಲೇಖನದೊಂದಿಗೆ ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿವರಗಳನ್ನು ನಮೂದಿಸಬೇಕು. ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರವನ್ನು ನೀಡಲಾಗುವುದು. ಲೇಖನಗಳನ್ನು ಫೆ.23ರ ಒಳಗಾಗಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ. 24/2, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು 560070 ಈ ವಿಳಾಸಕ್ಕೆ ಪೋಸ್ಟ್ ಮೂಲಕ ಅಥವಾ ಇ-ಮೇಲ್ krvp.info@gmail.com ಗೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.080-26718939, ಮೊ. 9483549159 ಇಲ್ಲಿ ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News