ಅಪಘಾತ: ಬೈಕ್ ಸಹಸವಾರ ಮೃತ್ಯು

Update: 2019-02-10 16:34 GMT

ಬೈಂದೂರು, ಫೆ.10: ಬೈಕೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟ ಘಟನೆ ಬಿಜೂರು ಗ್ರಾಮದ ಕಂಚಿಕಾನ್ ರಸ್ತೆಯಲ್ಲಿ ಫೆ.9ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಬೈಕ್ ಸಹಸವಾರ ಗಿರೀಶ್ ಆಚಾರಿ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಬೈಕ್ ಸವಾರ ಉಮೇಶ ಆಚಾರಿ ಮತ್ತು ಸೈಕಲ್ ಸವಾರ ನಾರಾಯಣ ದೇವಾಡಿಗ ಎಂಬವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಚಿಕಾನ್ ರಸ್ತೆಯಿಂದ ಉಪ್ಪುಂದ ಕಡೆಗೆ ಹೋಗುತ್ತಿದ್ದ ಬೈಕ್ ಎದುರಿನಲ್ಲಿ ಹೋಗುತ್ತಿದ್ದ ಸೈಕಲ್ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಸವಾರರು ಹಾಗೂ ಸೈಕಲ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಗಿರೀಶ್ ಆಚಾರಿ ಕುಂದಾಪುರ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News