ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖೆ: ಮಿತ್ತಬೈಲ್ ಉಸ್ತಾದ್ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ

Update: 2019-02-11 14:36 GMT

ಬಂಟ್ವಾಳ, ಫೆ. 11: ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಇಲ್ಲಿನ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಆಶ್ರಯದಲ್ಲಿ ಮರ್ಹೂಂ ಶೈಖುನಾ ಮಿತ್ತಬೈಲ್ ಉಸ್ತಾದ್ ಅನುಸ್ಮರಣೆ ಹಾಗೂ ತಹ್ಲೀಲ್ ಸಮರ್ಪಣಾ ಕಾರ್ಯಕ್ರಮ ರವಿವಾರ ರಾತ್ರಿ ಆಲಡ್ಕದಲ್ಲಿ ನಡೆಯಿತು.

ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಕ್ಲಸ್ಟರ್ ಅಧ್ಯಕ್ಷ ಅಬೂಸ್ವಾಲಿಹ್ ಫೈಝಿ ಕಾರ್ಯಕ್ರಮ ಉಧ್ಛಾಟಿಸಿದರು. ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯಾಧ್ಯಕ್ಷ ಇರ್ಷಾದ್ ದಾರಿಮಿ ಅಲ್-ಜಝರಿ ದುಆಃ ನೆರವೇರಿಸಿದರು. ಮಂಗಳೂರು-ಬಂದರ್ ಕೇಂದ್ರ ಜುಮಾ ಮಸೀದಿ ಖತೀಬ್ ಸ್ವದಖತುಲ್ಲಾ ಫೈಝಿ ಪ್ರಸ್ತಾವನೆಗೈದರು. ಉಸ್ತಾದ್ ಇಲ್ಯಾಸ್ ಅರ್ಷದಿ ಸಜಿಪ ಅನುಸ್ಮರಣಾ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ಗೌರವಾಧ್ಯಕ್ಷ ಹಾಜಿ ಎಸ್. ಅಬ್ದುಲ್ ಖಾದರ್ ಬೋಗೋಡಿ, ಕೋಶಾಧಿಕಾರಿ ಪಿ.ಬಿ. ಅಹ್ಮದ್ ಹಾಜಿ, ಹನೀಫ್ ಯಮಾನಿ, ಉಪಾಧ್ಯಕ್ಷ ಅಬ್ದುಲ್ ಮಜೀದ್ ಬೋಳಂಗಡಿ, ಸದಸ್ಯರಾದ ಹನೀಫ್ ಹಾಸ್ಕೊ, ಬಶೀರ್, ಅಬ್ದುಲ್ ಅಝೀಝ್ ಪಿ.ಐ, ಮುಹಮ್ಮದ್ ಶಫೀಕ್, ಅಬ್ದುಲ್ ಮುತ್ತಲಿಬ್, ಅಶ್ರಫ್ ಕೆಇಬಿ, ರಫೀಕ್ ಇನೋಳಿ, ಅಬ್ದುಲ್ ಸಲಾಂ ಸೆಂಟ್ರಿಂಗ್, ಅಬ್ದುಲ್ ಖಾದರ್ ಪೈಂಟರ್, ಜಬ್ಬಾರ್ ಬುರ್ಖಾ, ಸಿ.ಪಿ. ಶಾಕಿರ್, ಮುಹಮ್ಮದ್ ಬಂಗ್ಲೆಗುಡ್ಡೆ, ಸುಲೈಮಾನ್ ಬೋಳಂಗಡಿ ಮೊದಲಾದವರು ಭಾಗವಹಿಸಿದ್ದರು. ಶಾಖಾ ಸದಸ್ಯ ಅಬ್ದುಲ್ ಖಾದರ್ ಮದನಿ ಸ್ವಾಗತಿಸಿ, ಬಶೀರ್ ನಂದಾವರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News