ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು

Update: 2019-02-11 14:43 GMT

ಬೆಂಗಳೂರು, ಫೆ.11: ಆಪರೇಷನ್ ಕಮಲ ಆಡಿಯೊ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪವಿರುದ್ಧ ಕ್ರಮಕೈಗೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ.

ಜೆಡಿಎಸ್ ಮುಖಂಡ ಸಿದ್ದರಾಜು ಎಂಬುವರು ದೂರು ನೀಡಿದ್ದು, ಯಡಿಯೂರಪ್ಪ ಜನಪ್ರತಿನಿಧಿಯಾಗಿ ಮತ್ತೊಬ್ಬ ಜನಪ್ರತಿನಿಧಿಗೆ ಹಣದ ಆಮಿಷವೊಡ್ಡಿರುವುದು ಭ್ರಷ್ಟಾಚಾರವಾಗಿದೆ. ಈ ಬಗ್ಗೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆಪರೇಷನ್ ಕಮಲಕ್ಕೆ ಕೆಡವಲು ಬಿ.ಎಸ್.ಯಡಿಯೂರಪ್ಪ ಶಾಸಕರಿಗೆ ಹಣದ ಆಮಿಷ ಹಾಕಿದ್ದಾರೆ ಎನ್ನಲಾದ ಆಡಿಯೊವನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದರು. ಬಳಿಕ, ಈ ಆಡಿಯೊದಲ್ಲಿರುವ ಧ್ವನಿ ತಮ್ಮದೇ, ಆದರೆ, ಆಡಿಯೊ ಕ್ಲಿಪ್ ಅನ್ನು ತಮಗೆ ಬೇಕಾದಂತೆ ಬದಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ, ಅವರ ಹೇಳಿಕೆ ಆಧಾರಿಸಿ ತನಿಖೆ ನಡೆಸಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News