ಟೀಯೆಸ್ಸಾರ್-ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ: ನ್ಯಾ.ಶೈಲೇಂದ್ರಕುಮಾರ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚನೆ

Update: 2019-02-11 16:19 GMT

ಬೆಂಗಳೂರು, ಫೆ. 11: ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕೊಡಮಾಡುವ 2017 ಮತ್ತು 2018 ನೇ ಸಾಲಿನ ದಿನದರ್ಶಿ ವರ್ಷದ ಪ್ರತಿಷ್ಠಿತ ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿಗಳ ಆಯ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆರು ಸದಸ್ಯರ ಸಮಿತಿಯನ್ನು ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಹಿರಿಯ ಪತ್ರಕರ್ತರಾದ ಗಂಗಾಧರ ಮೊದಲಿಯಾರ್, ಎಚ್.ಆರ್.ಶ್ರೀಶ, ಬೆಲಗೂರು ಸಮೀವುಲ್ಲಾ ಮತ್ತು ಪಿ. ತ್ಯಾಗರಾಜ್ ಅವರು ಸದಸ್ಯರಾಗಿರುವ ಈ ಸಮಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎಂ. ರವಿಕುಮಾರ್ ಈ ಪ್ರಶಸ್ತಿಗಳಿಗೆ ಅರ್ಹರ ಹೆಸರುಗಳನ್ನು ಸಲಹೆ ನೀಡುವಂತೆ ಮಾಧ್ಯಮ ಸಂಘಟನೆಗಳಲ್ಲಿ ಮನವಿ ಮಾಡಿದ್ದಾರೆ. ಹಿರಿಯ ಪತ್ರಕರ್ತರ ಗೆಳೆಯರೂ ಕೂಡಾ ಪ್ರಶಸ್ತಿಗಳಿಗಾಗಿ ಅರ್ಹ ವ್ಯಕ್ತಿಗಳ ಹೆಸರು ಮತ್ತು ಅವರ ವ್ಯಕ್ತಿಚಿತ್ರಗಳನ್ನು ಇಲಾಖಾ ನಿರ್ದೇಶಕರಿಗೆ ನೇರವಾಗಿ ಕಳುಹಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News