'ಆಪರೇಷನ್' ಆಡಿಯೊ ಬಿಡುಗಡೆ ಪ್ರಕರಣ: ಕಾನೂನು ವಿಭಾಗಗಕ್ಕೆ ಪತ್ರ ಬರೆದ ಪೊಲೀಸರು

Update: 2019-02-11 16:21 GMT

ಬೆಂಗಳೂರು, ಫೆ.11: ಆಪರೇಷನ್ ಕಮಲ ಆಡಿಯೊ ಬಿಡುಗಡೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಕಾನೂನು ಸಲಹೆಗಾರ ಗಣೇಶ್ ಬಾಬು ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ ಎಫ್‌ಐಆರ್ ದಾಖಲಿಸುವ ಬಗ್ಗೆ ಪೊಲೀಸರು ಸಲಹೆ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ರವಿವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಶರಣಗೌಡ ವಿರುದ್ಧ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರೊಬ್ಬರು, ವಿಧಾನಸೌಧ ಠಾಣೆಗೆ ದೂರು ನೀಡಿ, ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದ ಸಿಡಿ ನಕಲಿ ಆಡಿಯೊ, ತಿರುಚಲಾಗಿದೆ ಎಂದು ಆರೋಪಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News