ಮಟ್ಕಾ ಚೀಟಿ ಬರೆಯುತ್ತಿದ್ದ ಆರೋಪಿ ಬಂಧನ
Update: 2019-02-11 17:24 GMT
ಮಂಗಳೂರು, ಫೆ.11: ಬೈಕಂಪಾಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ಬರೆಯುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪಿಯನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಧ್ವ ನಗರ ನಿವಾಸಿ ತಿಪ್ಪೇಸ್ವಾಮಿ (46) ಬಂಧಿತ ಆರೋಪಿ. ಆರೋಪಿಯಿಂದ ಮಟ್ಕಾ ಬರೆಯಲು ಉಪಯೋಗಿಸಿದ ಮಟ್ಕಾ ಚೀಟಿ, ಪೆನ್, ಎರಡು ಮೊಬೈಲ್ಗಳು ಹಾಗೂ 1,390 ರೂ. ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಆರ್.ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಣಂಬೂರು ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಫೀಕ್ ಕೆ.ಎಂ., ಪಿಎಸ್ಸೈ ಉಮೇಶ್ಕುಮಾರ್ ಎಂ.ಎನ್. ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.