ಪ್ರತಿಭಟನೆ ನಡೆಸದಂತೆ ಪಕ್ಷದ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ

Update: 2019-02-13 09:33 GMT

ಬೆಂಗಳೂರು, ಫೆ. 13: ಹಾಸನದ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಿರುವಂತೆ ಮುಖ್ಯಮಂತ್ರಿ  ಎಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. 

ಇಂದು ಕೆಲವು ವ್ಯಕ್ತಿಗಳು ಶಾಸಕರ ಮನೆಯ ಸಮೀಪ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು  ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು ನಿರ್ವಹಿಸುವ ಶಕ್ತಿ ನನಗಿದೆ. ಪಕ್ಷದ ಕಾರ್ಯಕರ್ತರು ಯಾವುದೇ ಪ್ರಚೋದನೆಗೆ ಒಳಗಾಗ ಬಾರದು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News