ಬಾಲಕ ನಾಪತ್ತೆ: ದೂರು

Update: 2019-02-13 17:36 GMT

ಉಪ್ಪಿನಂಗಡಿ, ಫೆ. 13: ಕೋಣಾಲು ಗ್ರಾಮದ ಆರ್ಲ ಮನೆ ನಿವಾಸಿ ನೆಲ್ಯಾಡಿಯ ಬೆಥನಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸೆಬಾಸ್ಟಿನ್ ಜಿ.ವಿ. (15) ಫೆ. 11ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

ಸೆಬಾಸ್ಟಿನ್ ಕೇರಳದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ. ಕಳೆದ 2 ವರ್ಷಗಳಿಂದ ಈತ ನೆಲ್ಯಾಡಿಯಲ್ಲಿ ವಿದ್ಯಾಭ್ಯಾಸ ಮುಂದುವರೆಸಿದ್ದ. ಕಲಿಕೆಯಲ್ಲಿ ಆಸಕ್ತಿ ಇಲ್ಲದ ಈತ ಫೆ.11 ರಂದು ಶಾಲೆಗೆ ಹೋಗುತ್ತೇನೆಂದು ಹೇಳಿ ಹೋದಾತ ಶಾಲೆಗೂ ಹೋಗದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿರುವುದಾಗಿ ಆತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News