ಫೆ.21 ರಂದು ದೇವನಹಳ್ಳಿಗೆ ಅಮಿತ್ ಶಾ ಆಗಮನ

Update: 2019-02-14 11:54 GMT

ಬಾಗೇಪಲ್ಲಿ,ಫೆ.14: ಇದೇ ತಿಂಗಳ 21 ರಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ ಶಾ ಅವರು ದೇವನಹಳ್ಳಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ತಿಳಿಸಿದ್ದಾರೆ.

ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮೇ ತಿಂಗಳಲ್ಲಿ ನಡೆಯುವುದರಿಂದ ಪೂರ್ವ ಸಿದ್ದತಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ 5 ವರ್ಷಗಳ ಅವಧಿಯಲ್ಲಿ ಇಡೀ ಜಗತ್ತಿನಲ್ಲಿ ಅಭಿವೃದ್ದಿ ಹೊಂದಿದ ರಾಷ್ಟ್ರಗಳಲ್ಲಿ ಭಾರತ ದೇಶ 6ನೇ ಸ್ಥಾನ ಪಡೆಯಲು ಪ್ರಮುಖ ಕಾರಣರಾಗಿದ್ದಾರೆ.ಅವರು ಮತ್ತೊಮ್ಮೆ ಪ್ರಧಾನಿಯಾದರೆ ಇನ್ನೂ ನಮ್ಮ ದೇಶ ಅಭಿವೃದ್ದಿಯಾಗುತ್ತದೆ ಎಂದ ಅವರು, ಚಿಕ್ಕಬಳ್ಳಾಪುರದಲ್ಲಿ ನಾನೇ ಅಭ್ಯರ್ಥಿ ಎಂದು ಅಧಿಕೃತವಾಗಿ ಪ್ರಕಟ ಆಗಿಲ್ಲ. ಒಂದು ವೇಳೆ ನಾನು ಅಭ್ಯರ್ಥಿಯಾದರೆ ನಾನೇ ಗೆಲ್ಲುತ್ತೇನೆ ಎಂದು ಮಾದ್ಯಮಗಳು ಹೇಳುತ್ತಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಅಲ್ಪ ಮತಗಳ ಅಂತರದಿಂದ ಪರಾಜಯಗೊಂಡಿದ್ದೇನೆ. ಈಗ ನಾನೇ ಗೆಲ್ಲುತ್ತೇನೆ ಎಂಬ ಭರವಸೆ ಇದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಜ್ಯೋತಿರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿಧರ್, ಗೋಪಿನಾಥ್, ಮಂಡಲಾಧ್ಯಕ್ಷ ಎಸ್.ಟಿ.ಬಾಬು, ಪ್ರಧಾನ ಕಾರ್ಯದರ್ಶಿ ಮಂಜುನಾಥ, ಎಪಿಎಂಸಿ ಅಂಜಿನಪ್ಪ, ಅಶ್ವತ್ತಪ್ಪ, ನಾಗಪ್ಪ, ನಂಜೇಶ್ ರೆಡ್ಡಿ, ಲೋಕೇಶ್ ಕುಮಾರ್, ನಿರ್ಮಲ, ಮಂಜುಳಮ್ಮ, ಮಾದ್ಯಮ ವಕ್ತಾರ ದೀರೆಜ್ ಸೇರಿ ಅನೇಕರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News