ಫೆ.15: ರಾಜ್ಯಮಟ್ಟದ ವಿಚಾರ ಸಂಕಿರಣ
Update: 2019-02-14 12:59 GMT
ಮಂಗಳೂರು, ಫೆ.14: ತುಳು ಸಾಹಿತ್ಯ ಅಕಾಡಮಿಯ ವತಿಯಿಂದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕನ್ನಡ ವಿಭಾಗದ ಸಹಕಾರದಿಂದ ‘ತುಳುವರ ಆರಾಧನಾ ಸಂಸ್ಕೃತಿ: ನೆಲೆ -ಬೆಲೆ’ ಎಂಬ ವಿಷಯದ ಬಗ್ಗೆ ಫೆ.15ರಂದು ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಧ್ಯಾಪಕ ಡಾ.ಅರುಣ್ ಕುಮಾರ್ ಎಸ್.ಆರ್, ಜಾನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ, ತುಳು ಅಕಾಡಮಿಯ ಮಾಜಿ ಸದಸ್ಯ ಎ.ಗುಣಪಾಲ ಕಡಂಬ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.