ಕ್ಷುಲ್ಲಕ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Update: 2019-02-14 13:32 GMT

ಬೆಂಗಳೂರು, ಫೆ.14: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಇಲ್ಲಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಕ್ಕೂರು ಲೇಔಟ್ ನಿವಾಸಿ ಜಯರಾಂ(45) ಕೊಲೆಯಾದ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸ್ನೇಹಿತ ಶಕೀಲ್ ಅನ್ನು ತನ್ನ ಮನೆಗೆ ಕರೆಸಿಕೊಂಡಿದ್ದ ಜಯರಾಂ ರಾತ್ರಿ ಮದ್ಯ ಸೇವಿಸಿದ್ದರು. ಈ ವೇಳೆ ಕ್ಷುಲ್ಲಕ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ತಾಳ್ಮೆ ಕಳೆದುಕೊಂಡ ಶಕೀಲ್ ಮನೆಯಲ್ಲಿದ್ದ ಕಬ್ಬಿಣದ ಸಲಾಕೆಯಿಂದ ಜಯರಾಂ ತಲೆಗೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಗುರುವಾರ ಬೆಳಗ್ಗೆ ಸ್ಥಳೀಯರು ಜಯರಾಂ ಮನೆ ಬಳಿ ರಕ್ತದ ಕಲೆಗಳಿರುವುದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ರಕ್ತದ ಮಡುವಿನಲ್ಲಿ ಜಯರಾಂ ಕೊಲೆಯಾಗಿ ಬಿದ್ದಿರುವುದು ಕಂಡುಬಂದಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News