ಮೂಡು ಅಲೆವೂರು ಸರಕಾರಿ ಶಾಲೆಯ ದತ್ತು ಸ್ವೀಕಾರ

Update: 2019-02-14 14:47 GMT

ಉಡುಪಿ, ಫೆ.14: ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲಿನ ಶ್ರೀವಿಷ್ಣು ಸ್ನೇಹ ಬಳಗದ ವತಿಯಿಂದ ಮೂಡು ಅಲೆವೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು 2019-20ನೇ ಸಾಲಿಗೆ ದತ್ತು ಸ್ವೀಕರಿಸುವ ಕಾರ್ಯಕ್ರಮವು ಕರ್ವಾಲಿನ ಶಾಲಾ ರಂಗಮಂದಿರದಲ್ಲಿ ಇತ್ತೀಚೆಗೆ ಜರಗಿತು.

ಸಂಘದ ಅಧ್ಯಕ್ಷ ಶ್ರೀಕಾಂತ ನಾಯಕ್ ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ ಅವರಲ್ಲಿ ದತ್ತು ಸ್ವೀಕಾರದ ಪ್ರಮಾಣ ಪತ್ರವನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಅಧ್ಯಕ್ಷತೆಯನ್ನು ಉದ್ಯಮಿ ರಾಘವೇಂದ್ರ ಕಿಣಿ ವಹಿಸಿದ್ದರು.

ಜಿ.ಪಂ. ಅಧ್ಯಕ್ಷ ದಿನಕರ್ ಬಾಬು, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ದ.ಕ ಹಾಗೂ ಉಡುಪಿ ಜಿಲ್ಲಾ ಮೀನುಗಾರ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಅಲೆವೂರು ಗ್ರಾಪಂ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಅಲೆವೂರು, ಸದಸ್ಯರಾದ ಪ್ರಶಾಂತ ಆಚಾರ್ಯ, ರಾಜ್ಯ ಬಿಜೆಪಿ ಕಾರ್ಯದರ್ಶಿ ಪ್ರೇಮ್ ಕುಮಾರ್, ನ್ಯಾಯವಾದಿ ಹಮ್ಜತ್ ಹೆಜಮಾಡಿ, ಶಶಿಕುಮಾರ್ ಶೆಟ್ಟಿ, ಅಶೋಕ್ ಶೆಟ್ಟಿಗಾರ್, ವಿಲಾಸ್ ನಾಯಕ್ ಪಾಂಗಾಳ, ಬೈಕಾಡಿ ಸುಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ಅಲೆವೂರು ಯುವಕ ಸಂಘದ ಗೌರವಾಧ್ಯಕ್ಷ ಆನಂದ ಸೇರಿಗಾರ್, ಅಲೆವೂರು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸದಾನಂದ ಆಚಾರ್ಯ ಕೊರಂಗ್ರಪಾಡಿ, ಗ್ರಾಪಂ ಉಪಾಧ್ಯಕ್ಷೆ ಜಯಲಕ್ಮಿ ಹಂಸರಾಜ್, ಸಂಘದ ಗೌರವಾಧ್ಯಕ್ಷ ವಾಮನ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News