ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗಿಳಿದ ಬಸ್

Update: 2019-02-15 04:41 GMT

ಮಂಗಳೂರು, ಫೆ.15: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಗದ್ದೆಗಿಳಿದ ಘಟನೆ ಮುಲ್ಕಿ ಸಮೀಪದ ಕೊಳ್ನಾಡು ಸೇತುವೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಉಡುಪಿ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಕೊಳ್ನಾಡು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕವನ್ನು ಏರಿ ವಿರುದ್ಧದ ರಸ್ತೆಯನ್ನು ದಾಟಿ ಗದ್ದೆಗೆ ಇಳಿದಿದೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ಬಸ್ಸಿನ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News