ಪ್ರಧಾನಿ ನೇತೃತ್ವದಲ್ಲಿ ಸಚಿವ ಸಂಪುಟದ ಸಭೆ
Update: 2019-02-15 06:05 GMT
ಹೊಸದಿಲ್ಲಿ, ಫೆ.15: ಪುಲ್ವಮಾದಲ್ಲಿ ಉಗ್ರರ ಅಟ್ಟಹಾಸದ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿವಾಸದಲ್ಲಿ ಇಂದು ಬೆಳಗ್ಗೆ ಕೇಂದ್ರ ಸಚಿವ ಸಂಪುಟದ ಸಭೆ ನಡೆಯಿತು.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 55 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ಭದ್ರತೆಗೆ ಸಂಬಂಧಿಸಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.
ಹುತಾತ್ಮರಾದ ಯೋಧರ ಪಾರ್ಥಿವ ಶರೀರವನ್ನು ಹೊಸದಿಲ್ಲಿಗೆ ತರಲು ವಾಯುಪಡೆಯ ಸಿ -17 ವಿಮಾನಗಳ ವ್ಯವಸ್ಥೆ ಮಾಡಲಾಗಿದೆ. ಗೃಹ ಸಚಿವ ರಾಜ್ ನಾಥ್ ಸಿಂಗ್ ಮಧ್ಯಾಹ್ನ ಶ್ರೀನಗರಕ್ಕೆ ತೆರಲಿದ್ದಾರೆ.