ಕಳ್ಳತನಕ್ಕೆ ಯತ್ನ; ಆರೋಪಿಯನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು

Update: 2019-02-15 10:06 GMT

ವಿಜಯಪುರ, ಫೆ.15: ನಗರದ ಗಣೇಶ ನಗರ ಬಡಾವಣೆಯ ಮನೆಯಿಂದ ಕಳ್ಳತನ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ.

ಬಸವನ ಬಾಗೇವಾಡಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಶಿವಪ್ಪ ಚಲವಾದಿ ಬಂಧಿತ ಆರೋಪಿ. ಈತ ಬಾಗೇವಾಡಿ ಠಾಣಾ ವ್ಯಾಪ್ತಿಯಲ್ಲಿ ಕೂಡಾ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬ ಆರೋಪಿ ಎನ್ನಲಾಗಿದ್ದು, ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ವೇಳೆ ಈತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News