ಸಚಿವ ಪುಟ್ಟರಂಗ ಶೆಟ್ಟಿಗೆ ಮತ್ತೊಮ್ಮೆ ನೋಟಿಸ್

Update: 2019-02-15 12:17 GMT

ಬೆಂಗಳೂರು, ಫೆ.15: ವಿಧಾನಸೌಧದಲ್ಲಿ ನಗದು ಪತ್ತೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಮತ್ತೊಮ್ಮೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನೋಟಿಸ್ ಜಾರಿ ಮಾಡಿದೆ.

ಎರಡು ದಿನಗಳ ಹಿಂದೆ ಎಸಿಬಿ ನೋಟಿಸ್ ನೀಡಿದಾಗ ಪುಟ್ಟರಂಗಶೆಟ್ಟಿ ಅನಾರೋಗ್ಯದ ನೆಪವೊಡ್ಡಿದ್ದರು. ಈ ಹಿನ್ನೆಲೆಯಲ್ಲಿ ಎರಡನೇ ಬಾರಿ ನೋಟಿಸ್ ಜಾರಿಗೊಳಿಸಲಾಗಿದ್ದು, ತನಿಖಾಧಿಕಾರಿ ರಾಜೇಂದ್ರ ಮುಂದೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸ್ಪಂದಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News