ಹುತಾತ್ಮ ಸ್ಮಾರಕದಲ್ಲಿ ವಿಎಚ್ಪಿಯಿಂದ ಶ್ರದ್ಧಾಂಜಲಿ
Update: 2019-02-15 14:22 GMT
ಉಡುಪಿ, ಫೆ.15: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪಡೆಯ ವೀರ ಯೋಧರಿಗೆ ಅಜ್ಜರ ಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದಲ್ಲಿ ವಿಶ್ವ ಹಿಂದು ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಯೋಧ ಗಣೇಶ್, ಅವಿಭಜಿತ ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ವಿಎಚ್ಪಿ ಜಿಲ್ಲಾ ಕಾರ್ಯದರ್ಶಿ ಪ್ರಮೋದ್ ಶೆಟ್ಟಿ ಮಂದಾರ್ತಿ, ನಗರಾಧ್ಯಕ್ಷ ಸಂತೋಷ್ ಬೊಳ್ಜೆ, ತಾಪಂ ಅಧ್ಯಕ್ಷ ನಳಿನಿ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತ ರಿದ್ದರು.