ಯೋಧರ ಹತ್ಯೆ: ವಕೀಲರ ಸಂಘದಿಂದ ಶ್ರದ್ಧಾಂಜಲಿ

Update: 2019-02-15 14:33 GMT

ಉಡುಪಿ, ಫೆ.15: ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮ ರಾದ ಭಾರತೀಯ ಸೈನಿಕರಿಗೆ ಉಡುಪಿ ವಕೀಲರ ಸಂಘದ ವತಿಯಿಂದ ಶ್ರದ್ಧಾಂಜಲಿಯನ್ನು ಶುಕ್ರವಾರ ಸಂಘದ ಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಚ್.ರತ್ನಾಕರ ಶೆಟ್ಟಿ, ಪ್ರಧಾನ ಕಾರ್ಯ ದರ್ಶಿ ಸಂತೋಷ್ ಹೆಬ್ಬಾರ್, ಹಿರಿಯ ವಕೀಲರಾದ ಸಂಜೀವ ಎ., ವಿಜಯ ಹೆಗ್ಡೆ, ಶಿರಿಯಾರ ಪ್ರಭಾಕರ ನಾಯಕ್, ಮೋಹನ್‌ದಾಸ್ ಪೈ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News