ವೇಶ್ಯಾವಾಟಿಕೆ ಅಡ್ಡೆಗೆ ದಾಳಿ: ಐವರ ಬಂಧನ

Update: 2019-02-15 17:21 GMT

ಮೈಸೂರು,ಫೆ.15: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿ, ಮುಂಬೈ ಮೂಲದ ಓರ್ವ ಮಹಿಳೆ ಸೇರಿದಂತೆ 6 ಮಹಿಳೆಯರನ್ನು ರಕ್ಷಿಸಿದ್ದಾರೆ.

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಕೇರಳದ ಕ್ಯಾಲಿಕಟ್‍ನ ಚೆಲುವೂರು ಪೋಸ್ಟ್ ನ ಧೀರಜ್(27) ಅಶ್ವಥ್(29) ಆಶಿಲ್(26) ಹಾಗೂ ಪಿರಿಯಾಪಟ್ಟಣ ತಾಲೂಕಿನ ಮರದೂರು ಗ್ರಾಮದ ಹರೀಶ್(38) ನಂಜನಗೂಡಿನ ಸಿಂಧುವಳ್ಳಿಯ ನಾರಾಯಣ(57) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ನಜರ್‍ಬಾದ್ ಎಸ್.ಕೆ. ಕಾಂಟಿನೆಂಟಲ್‍ನ 4ನೇ ಮಹಡಿಯಲ್ಲಿರುವ ಸ್ಪಾ ಮೇಲೆ ದಾಳಿ ಮಾಡಿದಾಗ ಮಸಾಜ್ ಮಾಡುವ ನೆಪದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ವೇಶ್ಯಾವಾಟಿಕೆಯಿಂದ ಸಂಪಾದಿಸಿದ್ದ 6 ಸಾವಿರ ರೂಪಾಯಿ ನಗದು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News