ಉಡುಪಿ ಶ್ರೀಕೃಷ್ಣ ಮಠದಲ್ಲಿ ಪವರ್ ಸ್ಟಾರ್ ಪುನೀತ್

Update: 2019-02-16 07:04 GMT

ಉಡುಪಿ, ಫೆ.16: ಕನ್ನಡ ಚಲನಚಿತ್ರ ನಟ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದು ಬೆಳಗ್ಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದಾರೆ.

ಈ ಸಂದರ್ಭ ಕಡಗೋಲು ಕೃಷ್ಣ, ಮುಖ್ಯಪ್ರಾಣರ ದರ್ಶನ ಮಾಡಿದ ಪುನೀತ್ ಮಾತನಾಡಿ, ಈ ಹಿಂದೆ ಅಪ್ಪಾಜಿ ಜೊತೆ ಹಲವು ಬಾರಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದೆ. ಆ ದಿನಗಳು ಯಾವತ್ತಿಗೂ ಮರೆಯಲಾಗದು ಎಂದು ತಂದೆ ಜೊತೆ ಕೃಷ್ಣ ಮಠಕ್ಕೆ ಆಗಮಿಸಿದ ದಿನಗಳನ್ನು ನೆನೆಪಿಸಿಕೊಂಡರು.

ತನ್ನ ನೂತನ ಚಲನಚಿತ್ರ ‘ನಟಸಾರ್ವಭೌಮ’ವನ್ನು ಗೆಲ್ಲಿಸಿದ್ದಕ್ಕೆ ಕನ್ನಡ ಪ್ರೇಕ್ಷಕರಿಗೆ ಪುನೀತ್ ಕೃತಜ್ಞತೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News