ಭಯೋತ್ಪಾದಕರ ದಾಳಿ ಭದ್ರತಾ ವೈಫಲ್ಯಕ್ಕೆ ಸಾಕ್ಷಿ: ಸಚಿವ ಝಮೀರ್ ಅಹ್ಮದ್

Update: 2019-02-16 13:01 GMT

ಹುಬ್ಬಳ್ಳಿ, ಫೆ. 16: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿ ನಡೆದಿರುವುದು ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯತೆಗೆ ಸಾಕ್ಷಿಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಭಾರತೀಯ ಯೋಧರ ಮೇಲೆ ಉಗ್ರರ ದಾಳಿ ನಡೆದು 40ಕ್ಕೂ ಹೆಚ್ಚು ಯೋಧರು ಮೃತರಾಗಿರುವುದು ನಮಗೆಲ್ಲ ತೀವ್ರ ನೋವನ್ನುಂಟು ಮಾಡಿದೆ ಎಂದು ಸಂತಾಪ ಸೂಚಿಸಿದರು.

ಹುತಾತ್ಮ ಯೋಧರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ. ಘಟನೆ ಪೂರ್ವನಿಯೋಜಿತವಾಗಿದ್ದರೂ ಗುಪ್ತಚರ ಇಲಾಖೆಗೆ ಮಾಹಿತಿಯೇ ಇಲ್ಲ ಎಂದು ಅವರು ಆರೋಪಿಸಿದರು. ಇದೇ 25ರಂದು ಹಾವೇರಿಯಲ್ಲಿ ಪಕ್ಷದ ಸಮಾವೇಶ ನಡೆಯುತ್ತಿದ್ದು ಇಂದು ಪೂರ್ವಭಾವಿ ಸಭೆ ನಡೆಸಲು ತೆರಳುತ್ತಿದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News