ಶಾಸಕ ಎ.ಮಂಜುನಾಥ್ ಗೆ ಹಾವು ಕಡಿತ: ಆಸ್ಪತ್ರೆ ದಾಖಲು

Update: 2019-02-16 13:20 GMT

ಬೆಂಗಳೂರು, ಫೆ.16: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜೆಡಿಎಸ್ ಶಾಸಕ ಎ. ಮಂಜುನಾಥ್ ಹಾವು ಕಡಿತಕ್ಕೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರ ರಾತ್ರಿ ಇಲ್ಲಿನ ಹಾಲಸಿಂಗನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಯೊಂದಲ್ಲಿ ಮಂಜುನಾಥ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹಾವು ಕಚ್ಚಿದೆ ಎಂದು ಹೇಳಲಾಗುತ್ತಿದೆ.

ಬಳಿಕ ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ತದನಂತರ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಗತಿಯಲ್ಲಿದ್ದು, ಅವರು ಚೇತರಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News