ಸಾರ್ವಜನಿಕ ಸಮಾಲೋಚನಾ ಕಾರ್ಯಗಾರ

Update: 2019-02-16 14:40 GMT

ಉಡುಪಿ, ಫೆ.16: ಅಮೃತ್, ಎಡಿಬಿ ಅನುದಾನದ ನೆರವಿನಲ್ಲಿ ಕ್ವಿಮಿಪ್ ಟ್ರಾಂಚ್-2 ಯೋಜನೆಯಡಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮತ್ತು ಯೋಜನೆಗಳ ಅನುಷ್ಠಾನದಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅಭಿ ಪ್ರಾಯ ಪಡೆಯುವ ಉದ್ದೇಶದಿಂದ ವಾರ್ಡ್ ಮಟ್ಟದ ಸಾರ್ವಜನಿಕ ಸಮಾ ಲೋಚನಾ ಕಾರ್ಯಾಗಾರವನ್ನು ಫೆ.15ರಂದು ಮಲ್ಪೆ ಏಳೂರು ಮೊಗವೀರ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಉಡುಪಿ ನಗರಸಭೆ ವ್ಯಾಪ್ತಿಯ ಕೊಳ, ವಡಬಾಂಡೇಶ್ವರ, ಮಲ್ಪೆ ಸೆಂಟ್ರಲ್, ಕಲ್ಮಾಡಿ ವಾರ್ಡ್‌ಗಳಿಗೆ ಕೆಯುಐಡಿಎಫ್‌ಸಿ ಮತ್ತು ಉಡುಪಿ ನಗರಸಭೆಯ ಸಹಯೋಗದೊಂದಿಗೆ ಆಯೋಜಿಸಲಾದ ಸಭೆಯಲ್ಲಿ ನಗರಸಭೆ ಹಾಗೂ ಕೆಯುಐಡಿಎಫ್‌ಸಿ ಅಧಿಕಾರಿಗಳು, ವಾರ್ಡ್‌ನ ಸದಸ್ಯರಾದ ಲಕ್ಷೀ ಮಂಜು ನಾಥ್ ಸಾಲಿಯಾನ್, ಎಡ್ಲೀನ್ ಕರ್ಕಡ, ಸುಂದರ ಜೆ.ಕಲ್ಮಾಡಿ ಹಾಗೂ ಸಾರ್ವಜನಿಕರು ಭಾಗವಹಿಸಿ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News