ದಿಲ್ಲಿ ಹೈಕೋರ್ಟ್‌ನಲ್ಲಿ ಅಗ್ನಿ ಅವಘಡ

Update: 2019-02-16 15:42 GMT

ಹೊಸದಿಲ್ಲಿ, ಫೆ.16: ದಿಲ್ಲಿ ಹೈಕೋರ್ಟ್ ಕಟ್ಟಡದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು ಯಾವುದೇ ನಾಶ ನಷ್ಟ ಆಗಿರುವ ಬಗ್ಗೆ ವರದಿಯಾಗಿಲ್ಲ .

 ಹೈಕೋರ್ಟ್ ನ ಕ್ಯಾಂಟೀನ್‌ ನ ಹೊಗೆ ಕೊಳವೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿ ತಿಳಿಸಲಾಗಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ಅರ್ಧಗಂಟೆಯೊಳಗೆ ಬೆಂಕಿಯನ್ನು ನಿಯಂತ್ರಿಸಿದವು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ಯಾಂಟೀನ್‌ ನಲ್ಲಿ ವಕೀಲರಿಗೆ ಮಾತ್ರ ಪ್ರವೇಶವಿದ್ದು ಇತರರು ವಕೀಲರ ಜೊತೆಗೆ ಬಂದರೆ ಮಾತ್ರ ಪ್ರವೇಶಾವಕಾಶ ಇದೆ.

ಕ್ಯಾಂಟೀನ್‌ನ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಲ್ಲೇ ಪಕ್ಕದಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಳ್ಳುವ ಅಪಾಯವನ್ನು ಮನಗಂಡು ಕ್ಯಾಂಟೀನ್‌ನಲ್ಲಿದ್ದ ಎಲ್ಲರನ್ನೂ ಹೊರಗೆ ಕಳುಹಿಸಲಾಯಿತು. ಬಳಿಕ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಲ್ಪ ಮಟ್ಟಿಗೆ ಹಾನಿ ಸಂಭವಿಸಿದೆ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News