ಮದ್ಯದ ಅಮಲಿನಲ್ಲಿ ಯುವಕನ ಹತ್ಯೆ

Update: 2019-02-16 16:41 GMT

ಬೆಂಗಳೂರು, ಫೆ.16: ಮದ್ಯದ ಅಮಲಿನಲ್ಲಿ ಯುವಕನೋರ್ವನನ್ನು ಕೊಲೆಗೈದಿರುವ ದುರ್ಘಟನೆ ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕನ್ನಮಂಗಲದ ನಿವಾಸಿ ರಾಮಮೂರ್ತಿ (28) ಎಂಬಾತ ಕೊಲೆಯಾದ ಯುವಕನಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳಬಾಗಿಲಿನ ಸಾಯನೂರು ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ್ ಎಂಬವರ ಪುತ್ರ ದೇವರಾಜ್ ಹಾಗೂ ಸುನೀಲ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಕನ್ನಮಂಗಲ ಹೊರವಲಯ ಭಾಗದ ಒಂಟಿ ಮನೆಯಲ್ಲಿ ಮದ್ಯದ ಅಮಲಿನಲ್ಲಿ ಗಲಾಟೆ ನಡೆದಿದ್ದು, ದುಷ್ಕರ್ಮಿಗಳು, ರಾಮಮೂರ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಯುವತಿಯೊಬ್ಬಾಕೆಯ ಪ್ರೇಮ ವಿಚಾರಕ್ಕೆ ಈ ಕೃತ್ಯ ನಡೆಸಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಸಂಬಂಧ ಕಾಡುಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News