ಮಾರಕಾಸ್ತ್ರದಿಂದ ದಾಳಿ: ಗಂಭೀರ ಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತ ಮೃತ್ಯು

Update: 2019-02-17 17:12 GMT

ಕಾಸರಗೋಡು, ಫೆ. 17: ಯುವ ಕಾಂಗ್ರೆಸ್ ಕಾರ್ಯಕರ್ತರಿಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದ ಘಟನೆ ರವಿವಾರ ರಾತ್ರಿ ಪೆರಿಯದಲ್ಲಿ ನಡೆದಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ (24) ಮತ್ತು ಶರತ್ ಲಾಲ್ (21) ಮೃತರು ಎಂದು ಗುರುತಿಸಲಾಗಿದೆ. ಕೃಪೇಶ್ ಸ್ಥಳದಲ್ಲೇ ಮೃತಪಟ್ಟರೆ  ಶರತ್ ಲಾಲ್ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ರಾತ್ರಿ 8 ಗಂಟೆಯ ಸುಮಾರಿಗೆ ಪೆರಿಯ ಕಲ್ಯೊಟ್ ಎಂಬಲ್ಲಿ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ತಂಡವು ಬೈಕ್ ನ್ನು ಅಡ್ಡಗಟ್ಟಿ  ಮಾರಕಾಸ್ತ್ರದಿಂದ ಕೊಚ್ಚಿ ಕೃತ್ಯ ನಡೆಸಿದ್ದು, ಪೂರ್ವ ದ್ವೇಷ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು ಪೊಲೀಸರು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಂಡಿದ್ದಾರೆ. ಕೃತ್ಯದ  ಹಿಂದೆ ಸಿಪಿಎಂನ ಕೈವಾಡ ಎಂದು ಕಾಂಗ್ರೆಸ್  ಆರೋಪಿಸಿದ್ದು, ಘಟನೆಯನ್ನು ಖಂಡಿಸಿ ಕಾಸರಗೋಡು ಜಿಲ್ಲೆಯಲ್ಲಿ ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News