ಉಗ್ರರ ದಾಳಿ ಬೆಂಬಲಿಸಿ ಫೇಸ್‌ಬುಕ್‌ ನಲ್ಲಿ ಪೋಸ್ಟ್: ಮತ್ತೊಬ್ಬ ಯುವಕ ಸೆರೆ

Update: 2019-02-17 17:41 GMT

ಬೆಂಗಳೂರು, ಫೆ.17: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಬೆಂಬಲಿಸಿ, ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ ಯುವಕನೋರ್ವನನ್ನು ಸೈಬರ್ ಕ್ರೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ರಾಮಯ್ಯ ಲೇಔಟ್‌ನ ರಶೀದ್(20) ಬಂಧಿತ ಆರೋಪಿ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ಫೆ.14ರಂದು ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪದಕರ ದಾಳಿಯನ್ನು ಬೆಂಬಲಿಸಿ ಆರೋಪಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಬರಹಗಳನ್ನು ಪ್ರಕಟಿಸಿ, ಸಾಮರಸ್ಯ ಸ್ವಾಸ್ಥ ಕದಡಲು ಮುಂದಾಗಿದ್ದ ಎನ್ನಲಾಗಿದ್ದು, ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ತನಿಖೆ ನಡೆಸಿದ ಸೈಬರ್ ಕ್ರೈಂ ಠಾಣಾ ಪೊಲೀಸರು, ಆರೋಪಿಯನ್ನು ರವಿವಾರ ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News