ನಮ್ಮ ದೇಶದೊಳಗಿನ ಉಗ್ರವಾದವನ್ನು ಮಟ್ಟಹಾಕಬೇಕಿದೆ: ಸಿಎಂ ಕುಮಾರಸ್ವಾಮಿ

Update: 2019-02-18 16:58 GMT

ಮೈಸೂರು,ಫೆ.18: ಪಾಕಿಸ್ತಾನವನ್ನು ಜಾಗತಿಕ ಉಗ್ರರಾಷ್ಟ್ರ ಎಂದು ಘೋಷಣೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ. ನಮ್ಮ ದೇಶದೊಳಗಿನ ಉಗ್ರವಾದವನ್ನು ಮಟ್ಟಹಾಕಬೇಕಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸಲು ಸೋಮವಾರ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಪಾಕಿಸ್ತಾನವನ್ನು ಜಾಗತಿಕ ಉಗ್ರರಾಷ್ಟ್ರ ಎಂದು ಘೋಷಣೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ. ಬೇರೆ ರಾಷ್ಟ್ರಗಳಿಗೆ ನಾವು ಒತ್ತಾಯ ಮಾಡಬಹುದು ಅಷ್ಟೇ. ಆದರೆ ನಮ್ಮ ದೇಶದೊಳಗಿನ ಉಗ್ರವಾದವನ್ನು ಮಟ್ಟಹಾಕಬೇಕಿದೆ ಎಂದರು.

ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಶ್ರೀಗಳು, ಕೈಲಾಸಾಶ್ರಮದ ಶ್ರೀಗಳ ನೇತೃತ್ವದಲ್ಲಿ ಕುಂಭಮೇಳ ಬಹಳ ಯಶಸ್ವಿಯಾಗಿ ನಡೆಯುತ್ತಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ಕುಂದುಂಟಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿರುವುದಾಗಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News