ಗಂಗೊಳ್ಳಿ: ಹಿಟ್ ಆ್ಯಂಡ್ ರನ್; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2019-02-19 04:10 GMT
ವಿಖ್ಯಾತ್

ಉಡುಪಿ, ಫೆ. 19: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ತಡರಾತ್ರಿ ನಡೆದಿದೆ. 

ಮೃತರನ್ನು ಗಂಗೊಳ್ಳಿ ಬಾವಿಕಟ್ಟೆ ನಿವಾಸಿ ವಿಖ್ಯಾತ್ (24) ಎಂದು ಗುರುತಿಸಲಾಗಿದೆ. ಅವರು ಕುಂದಾಪುರದ ಹೊಟೇಲ್ ಒಂದರಲ್ಲಿ ಕೆಲಸಕ್ಕಿದ್ದು, ತಡರಾತ್ರಿ ಕೆಲಸ ಮುಗಿಸಿ ವಾಪಾಸಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ಅರಿತ ಗಂಗೊಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News