‘ಮೈತ್ರಿಯ ನಡಿಗೆ ಅಭಿವೃದ್ಧಿಯ ಕಡೆಗೆ ’ ಸರಕಾರದ ಸಾಧನೆಗಳ ಸಂಚಿಕೆ ಬಿಡುಗಡೆ

Update: 2019-02-19 17:48 GMT

ಮಂಗಳೂರು, ಫೆ.19: ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯದ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಅವರ ನೇತೃತ್ವದ ಸರಕಾರದ ಆರು ತಿಂಗಳ ಸಾಧನೆಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಹಿತಿಗಳನ್ನೊಳಗೊಂಡ ‘ಮೈತ್ರಿಯ ನಡಿಗೆ ಅಭಿವೃದ್ಧಿಯ ಕಡೆಗೆ’ ಸಂಚಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯಸರಕಾರದ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಮಂಗಳವಾರ ನಗರದ ಸರ್ಕ್ಯೂಟ್ ಹೌಸ್‌ನ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ರೋಹಿಣಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News