ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಸಂಸದ ಜಿ.ಎಂ.ಸಿದ್ದೇಶ್ವರ್

Update: 2019-02-19 18:00 GMT

ದಾವಣಗೆರೆ,ಫೆ.19: ಬಿಜೆಪಿ ಈ ಬಾರಿಯೂ ದೇಶದಲ್ಲಿ ಸುಮಾರು 280ಕ್ಕೂ ಸ್ಥಾನ ಗಳಿಸುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.

ಮಂಗಳವಾರ ನಮ್ಮ ಪರಿವಾರ ಬಿಜೆಪಿ ಪರಿವಾರ ಅಭಿಯಾನದ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದಲ್ಲಿರುವ ಸಂಸದರ ನಿವಾಸದಲ್ಲಿ ಬಿಜೆಪಿ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಪ್ರಧಾನಿ ಮೋದಿ ಅವರ ಆಡಳಿತ ಮೆಚ್ಚಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಅವರು ಆಡಳಿತ ಬರಬೇಕೆಂದು ಎಲ್ಲಾ ಕಾರ್ಯಕರ್ತರು ಕೆಲಸ ನಿರ್ವಹಿಸುತ್ತಿದ್ದಾರೆ. ದೇಶ ರಕ್ಷಣೆ, ದೇಶದ ಉಳಿವು, ಅಭಿವೃದ್ದಿಗಾಗಿ ಇರುವ ಏಕೈಕ ವ್ಯಕ್ತಿ ಮೋದಿ. ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಹತ್ಯೆ ನಡೆದಿರುವುದು ಖಂಡನೀಯ. ದೇಶದ ಜನರೂ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದು ಹೇಳುತ್ತಿದ್ದಾರೆ. ಅದಕ್ಕಾಗಿ ಯೋಧರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅದಕ್ಕಾಗಿ ಯೋಧರು ಮೂವರು ಉಗ್ರಗಾಮಿಗಳನ್ನು ಹತ್ಯೆ ಮಾಡಿದ್ದಾರೆ. ರಾಷ್ಟ್ರರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದರು.

ಫೆ.27ರಂದು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರು ದಾವಣಗೆರೆಗೆ ಆಗಮಿಸಲಿದ್ದು, ಈ ವೇಳೆ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಎಲ್ಲಾ ಕಾರ್ಯಕರ್ತರೊಂದಿಗೆ ಬೂತ್ ಮಟ್ಟದ ಸಭೆ ನಡೆಸಲಿದ್ದಾರೆ ಎದು ಅವರು ಮಾಹಿತಿ ನೀಡಿದರು.

ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾಧವ್, ಹೆಚ್.ಎನ್. ಶಿವಕುಮಾರ್, ಕೊಂಡಜ್ಜಿ ಜಯಪ್ರಕಾಶ್, ಟಿಂಕರ್ ಮಂಜಣ್ಣ ಹಾಗೂ ಕಾರ್ಯಕರ್ತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News