ಬೆಂಗಳೂರು: ಫೆ.22ರಿಂದ ಕರಕುಶಲ ವಸ್ತುಗಳ ಪ್ರದರ್ಶನ ‘ಚಿತ್ತಾರ’

Update: 2019-02-20 07:53 GMT

ಬೆಂಗಳೂರು, ಫೆ.20: ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಫೆ.22ರಿಂದ ಮಾರ್ಚ್ 3ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ‘ಚಿತ್ತಾರ’ ಸಂತೆ ಆಯೋಜಿಸಲಾಗಿದೆ.

 ಈ ಪ್ರದರ್ಶನದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

10 ದಿನಗಳ ಪ್ರದರ್ಶನವು ಪ್ರತಿದಿನ ಪೂರ್ವಾಹ್ನ 11ರಿಂದ ಸಂಜೆ 7ರವರೆಗೆ ಇರಲಿದೆ. ಕರ್ನಾಟಕ ಚಿತ್ರ ಲಾಪರಿಷತ್ತು ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News