ದ.ಕ. ಜಿಲ್ಲಾ ಕಾಂಗ್ರೆಸ್ ಸಮಾವೇಶದ ಯಶಸ್ಸಿಗೆ ಕರೆ

Update: 2019-02-20 10:30 GMT

ಮಂಗಳೂರು, ಫೆ,20: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಜನಪ್ರತಿನಿಧಿಗಳ ಹಾಗೂ ಕಾರ್ಯಕರ್ತರ ಜಿಲ್ಲಾ ಸಮಾವೇಶವು ಮಾರ್ಚ್ 6ರಂದು ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ. ಇದರ ಯಶಸ್ಸಿಗೆ ಶ್ರಮಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಕರೆ ನೀಡಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಬುಧವಾರ ಜರುಗಿದ ಜಿಲ್ಲಾ ಕಾಂಗ್ರೆಸ್‌ನ ತುರ್ತು ಸಭೆಯಲ್ಲಿ ಸಮಾವೇಶದ ಸಿದ್ಧತೆಯ ಕುರಿತು ಅವರು ಮಾತನಾಡುತ್ತಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಪೂರ್ವಭಾಯಾಗಿ ಪ್ರಚಾರ ಕೈಗೊಳ್ಳುವ ದೃಷ್ಟಿಯಿಂದ ಎಲ್ಲಾ 8 ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಕಾರ್ಯದರ್ಶಿಗಳಾದ ಮಮತಾ ಗಟ್ಟಿ, ನವೀನ್ ಡಿಸೋಜ, ಪುರುಷೋತ್ತಮ ಚಿತ್ರಾಪುರ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಕಾಂಗ್ರೆಸ್ ವಿವಿಧ ಘಟಕಗಳ ಅಧ್ಯಕ್ಷರಾದ ಎನ್.ಎಸ್. ಕರೀಂ, ಅಬ್ದುಲ್ಲಾ ಬಿನ್ನು, ಶಾಹುಲ್ ಹಮೀದ್, ಶಾಲೆಟ್ ಪಿಂಟೊ, ಬಲರಾಜ್ ರೈ, ಬಿ.ಎಂ.ಭಾರತಿ, ಪದ್ಮನಾಭ ನರಿಂಗಾನ, ಲೋಕೇಶ್ವರಿ ವಿನಯಚಂದ್ರ, ಪ್ರಸಾದ್ ರಾಜ್ ಕಾಂಚನ್, ಸಂತೋಷ್ ಕುಮಾರ್ ಶೆಟ್ಟಿ, ಯು.ಎಚ್.ಖಾಲಿದ್, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶುಭೋದಯ ಆಳ್ವ ಸ್ವಾಗತಿಸಿದರು. ಬಿ.ಎ.ಮುಹಮ್ಮದ್ ಹನೀಫ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News