ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Update: 2019-02-20 12:03 GMT

ಉಡುಪಿ, ಫೆ.20: ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿ ಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ತಾಲೂಕು ಮಟ್ಟದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಬಹು ಮಾನ ವಿತರಣಾ ಕಾರ್ಯಕ್ರಮ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್‌ನ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

ವೇದಿಕೆಯ ಅಧ್ಯಕ್ಷ ಕೆ.ಪಿ.ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೋ, ಕನ್ನರ್ಪಾಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಶಿಕ್ಷಕ ಜಗದೀಶ್ ಆಚಾರ್ಯ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ರಿಶ್ಚಿಯನ್ ಪ್ರೌಢಶಾಲೆಯ ಶಿಕ್ಷಕಿ ವಿಮಲಾ ಡೆರಿಕ್ ಹಾಗೂ ಹೂಡೆಯ ಹುಸೇನ್ ಸಾಹೇಬ್ ಬಹುಮಾನ ವಿತರಿಸಿ ದರು. ಸ್ಪರ್ಧೆಗಳ ಸಂಯೋಜಕ ಹಾಗೂ ವೇದಿಕೆಯ ಮಾಜಿ ಅಧ್ಯಕ್ಷ ಅಲ್ಫೋನ್ಸ್ ಡಿಕೋಸ್ಟ ಸ್ವಾಗತಿಸಿದರು. ಕಾರ್ಯದರ್ಶಿ ಚಾರ್ಲ್ಸ್ ಆಂಬ್ಲರ್ ವಂದಿ ಸಿದರು. ಮಾಜಿ ಅಧ್ಯಕ್ಷ ಲೂವಿಸ್ ಅಲ್ಮೇಡಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News