ಅನಾರೋಗ್ಯದಿಂದ ಸಿಆರ್ಪಿಎಫ್ ಯೋಧ ಮೃತ್ಯು
Update: 2019-02-20 17:10 GMT
ವಿಜಯಪುರ,ಫೆ.20: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಂದಗಿ ತಾಲೂಕಿನ ಸಿಆರ್ಪಿಎಫ್ ಯೋಧ ಚಿದಾನಂದ ಭಜಂತ್ರಿ (36) ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೋಳ್ಳಿ ಗ್ರಾಮದ ಚಿದಾನಂದ ಭಜಂತ್ರಿ ಕಳೆದ 15 ವರ್ಷದಿಂದ ಹೈದ್ರಾಬಾದ್ ಎಂಬಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಹೈದ್ರಾಬಾದ್ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.
ನಾಳೆ ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತಂದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ತಿಳಿದುಬಂದಿದೆ.