ಫೆ.22ಕ್ಕೆ ಸ್ಮಶಾನದಲ್ಲಿ 'ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಮಾವೇಶ'

Update: 2019-02-20 17:33 GMT

ಬೆಂಗಳೂರು, ಫೆ. 20: ‘ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಮಾವೇಶ’ವನ್ನು ಫೆ.22ರ ಮಧ್ಯಾಹ್ನ 3:30ಕ್ಕೆ ಇಲ್ಲಿನ ಹಲಸೂರಿನ ಕಲ್ಲಪಲ್ಲಿ ಸ್ಮಶಾನದಲ್ಲಿ ಏರ್ಪಡಿಸಿದ್ದು, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್ ವಹಿಸಲಿದ್ದು, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪಾಲ್ಗೊಳ್ಳಲಿದ್ದಾರೆ.

ಜಾತಿ-ಧರ್ಮಗಳ ನಡುವಿನ ಸಂಘರ್ಷ, ಶಿಕ್ಷಣದಲ್ಲಿನ ತಾರತಮ್ಯ ನೀತಿಯನ್ನು ಖಂಡಿಸಿ ಸಮಾನತೆಗಾಗಿ ರಾಜ್ಯ ಮಟ್ಟದಲ್ಲಿ ಆಂದೋಲನವನ್ನು ರೂಪಿಸಲು ಪೂರ್ವಭಾವಿಯಾಗಿ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಯಕರ್ನಾಟಕ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News