ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ವರ್ಗಾವಣೆ

Update: 2019-02-21 04:05 GMT
ಟಿ.ಆರ್.ಸುರೇಶ್            ಸಂದೀಪ್ ಪಾಟೀಲ್  

ಮಂಗಳೂರು, ಫೆ.21: ಮಂಗಳೂರು ನಗರ ಪೂಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಅವರ ಸ್ಥಾನಕ್ಕೆ ಸಂದೀಪ್ ಪಾಟೀಲ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪರ್ವ ಈಗಾಗಲೇ ಆರಂಭಗೊಂಡಿದ್ದು, ಅದರಂತೆ ಫೆ.20ರಿಂದಲೇ ಅನ್ವಯವಾಗುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಟಿ.ಆರ್.ಸುರೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.

ನೂತನ ಪೊಲೀಸ್ ಆಯುಕ್ತರಾಗಿ ನಿಯುಕ್ತಿಗೊಂಡಿರುವ ಸಂದೀಪ್ ಪಾಟೀಲ್ ಅವರು ಸದ್ಯ ಡಿಐಜಿ ಮತ್ತು ಬೆಂಗಳೂರು ಸಿಎಆರ್ ಯುನಿಟ್ಸ್‌ನ ಸಹಾಯಕ ಆಯುಕ್ತರಾಗಿದ್ದಾರೆ.

ಇವರನ್ನಲ್ಲದೆ 30ರಷ್ಟು ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಯಾಗುವಂತೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News