ಶಾಸಕ ಗಣೇಶ್ ರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ

Update: 2019-02-21 04:31 GMT

ಬೆಂಗಳೂರು, ಫೆ.21: ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಸಿಂಗ್ ಅವರನ್ನು ಇಂದು ಬಿಡದಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಕಳೆದ ತಿಂಗಳು ಈಗಲ್ಟನ್ ರೆಸಾರ್ಟ್ ನಲ್ಲಿ ನಡೆದ ಶಾಸಕ ಆನಂದ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ ನಲ್ಲಿ ಬುಧವಾರ ಬಂಧನಕ್ಕೊಳಗಾಗಿರುವ ಶಾಸಕ ಗಣೇಶ್ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದಾರೆ.

ಗಣೇಶರನ್ನು ಬಿಡದಿ ಪೊಲೀಸರು ಹೇಳಿಕೆ ಪಡೆದ ಬಳಿಕ  ರಾಮನಗರದ ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಗಣೇಶ್ ಅವರಿಗೆ ಇಂದು ಜಾಮೀನು  ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಕಡಿಮೆ. ಶುಕ್ರವಾರ ಅವರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News