ಹಾಸನ: ಕಾರು ಅಪಘಾತ; ಇಬ್ಬರು ಮಕ್ಕಳ ಸಹಿತ ನಾಲ್ವರು ಸಜೀವ ದಹನ

Update: 2019-02-21 07:39 GMT

ಹಾಸನ, ಫೆ.21: ಕಾರೊಂದು ಅಪಘಾತಕ್ಕೀಡಾಗಿ ಬೆಂಕಿಗಾಹುತಿಯಾದ ಪರಿಣಾಮ ಇಬ್ಬರು ಮಕ್ಕಳ ಸಹಿತ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಬೆಂಗಳೂರಿನ ವಿನಾಯಕ ನಗರ ನಿವಾಸಿಗಳಾದ ವಿವೇಕ್ ನಾಯಕ್, ಅವರ ಪತ್ನಿ, ರೇಶ್ಮಾ ನಾಯಕ್, ಮಕ್ಕಳಾದ ಅವಾಂತಿ ನಾಯಕ್ ಮತ್ತು ವಿಘ್ನೇಶ್ ನಾಯಕ್ ಎಂದು ಗುರುತಿಸಲಾಗಿದೆ.

ಇವರು ಬೆಂಗಳೂರು ಕಡೆಯಿಂದ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ವೇಳೆ ಉದಯಪುರ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಪಂಕ್ಚರ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಸಾರ್ವಜನಿಕ ಶೌಚಾಲಯಕ್ಕೆ ಢಿಕ್ಕಿ ಹೊಡೆದಿದೆ. ಅಫಘಾತದ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾರನ್ನು ಭಾಗಶಃ ಆವರಿಸಿಕೊಂಡಿದ್ದರಿಂದ ಅಪಘಾತದಲ್ಲಿ ಗಾಯಗೊಂಡಿದ್ದ ನಾಲ್ವರ ಪೈಕಿ ಮೂವರು ಸಜೀವ ದಹನಗೊಂಡಿದ್ದಾರೆ. ಓರ್ವ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News