ನೇಮಕಗೊಂಡ ಒಂದೇ ದಿನದಲ್ಲಿ ಎಐಸಿಸಿ ಕಾರ್ಯದರ್ಶಿ ಹುದ್ದೆ ಕಳೆದುಕೊಂಡ ಕುಮಾರ್ ಆಶೀಷ್

Update: 2019-02-21 09:26 GMT

ಹೊಸದಿಲ್ಲಿ, ಫೆ.21: ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಸಹಾಯಕ್ಕಾಗಿ ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಕುಮಾರ್ ಆಶೀಷ್  ಅವರ ನೇಮಕಾತಿ ಆದೇಶವನ್ನು ಒಂದೇ ದಿನದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಹಿಂಪಡೆದಿದ್ದಾರೆ.

ಕುಮಾರ್ ಆಶೀಷ್ ಬುಧವಾರ ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. 2005ರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಆಶೀಷ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕಾರಣಕ್ಕಾಗಿ ಕುಮಾರ್ ಆಶೀಷ್  ಕಾರ್ಯದರ್ಶಿಯಾಗಿ ನೇಮಕಗೊಂಡ 24 ಗಂಟೆಯೊಳಗೆ ಆ ಹುದ್ದೆಯನ್ನು ಕಳೆದುಕೊಂಡಿದ್ದಾರೆ. ಅವರ ಬದಲಿಗೆ ಸಚಿನ್ ನಾಯ್ಕ್ ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ ಪ್ರಭಾರ ) ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News