ಹುತಾತ್ಮ ಯೋಧ ಗುರು ಕುಟುಂಬಕ್ಕೆ ತಿಂಗಳ ವೇತನ ನೀಡಿದ ಪಿಎಸ್ಸೈ

Update: 2019-02-21 15:01 GMT

ಮಂಡ್ಯ, ಫೆ.21: ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆ ಪಿಎಸ್ಸೈ ಅಗ್ನಿ, ಹುತಾತ್ಮ ಯೋಧ ಗುರು ಸಹೋದರ ಹೊನ್ನಯ್ಯ ಅಕೌಂಟ್‍ಗೆ ತಿಂಗಳ ವೇತನ 45 ಸಾವಿರ ರೂಪಾಯಿ ಹಣವನ್ನು ಬ್ಯಾಂಕ್ ಮೂಲಕ ವರ್ಗಾವಣೆ  ಮಾಡಿ ಯೋಧನ ಕುಟುಂಬಕ್ಕೆ ಸಹಾಯ ಮಾಡಿ, ಮಾನವೀಯತೆ ಮೆರೆದಿದ್ದಾರೆ.

ಉಗ್ರರ ಅಟ್ಟಹಾಸಕ್ಕೆ 44 ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅಗ್ನಿ ದುಃಖ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತಮ ಕೈಲಾದಷ್ಟು ಸಹಾಯ ಮಾಡಿದ್ದಾಗಿ ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News