ತೆಂಕನಿಡಿಯೂರು ಕಾಲೇಜಿನಲ್ಲಿ ಯೋಧರಿಗೆ ಶ್ರದ್ಧಾಂಜಲಿ
Update: 2019-02-21 15:16 GMT
ಉಡುಪಿ, ಫೆ.21: ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಪುಷ್ಪನಮನ ಸಲ್ಲಿಸಿದ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ವೀರಮರಣ ಹೊಂದಿದ ಸೈನಿಕರನ್ನು ಸೇವೆಯನ್ನು ಸ್ಮರಿಸಿದರು. ಆಂತರಿಕ ಗುಣಮಟ್ಟ ಕೋಶದ ಸಂಯೋಜಕ ಡಾ. ಸುರೇಶ್ ರೈ ಕೆ. ಮಾತನಾಡಿದರು.
ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.