ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಕಾರ್ಯಕರ್ತರ ವಿರುದ್ಧ ಕ್ರಮ: ಶಿವಸೇನೆ

Update: 2019-02-22 11:32 GMT

ನಾಗಪುರ, ಫೆ.22: ಪುಲ್ವಾಮ ದಾಳಿಯ ನಂತರ ಇಲ್ಲಿನ ಯವತ್ಮಾಲ್ ಎಂಬಲ್ಲಿನ ಕಾಲೇಜೊಂದರಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಸೇನೆ ತಿಳಿಸಿದೆ.

ಬುಧವಾರ ರಾತ್ರಿ ಈ ದಾಳಿ ನಡೆದಿತ್ತು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆದ ನಂತರ ಯವತ್ಮಾಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ವಿದ್ಯಾರ್ಥಿಗಳ ಮೇಲಿನ ದಾಳಿಯನ್ನು ಯುವಸೇನೆ ಕಾರ್ಯದರ್ಶಿ ವರುಣ್ ಸರ್ದೇಸಾಯಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News