ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಬಿಎಸ್ವೈ ನಿರ್ಧಾರ
Update: 2019-02-22 14:38 GMT
ಬೆಂಗಳೂರು, ಫೆ. 22: ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಲಿಂಗೈಕ್ಯರಾದ ಹಿನ್ನೆಲೆ ಹಾಗೂ ಪುಲ್ವಾಮಾದಲ್ಲಿ ಯೋಧರ ಹತ್ಯೆ ಕಾರಣ ಈ ಬಾರಿ (ಫೆ.27) ನಾನು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಶುಭಾಶಯ ಕೋರಲು ಬರುವ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಅಂದು ಹಾರ ಅಥವಾ ಸಿಹಿ ತಿಂಡಿಯನ್ನು ತರಬಾರದು ಹಾಗೂ ಸಿಹಿ ಹಂಚಿ ಸಂಭ್ರಮಿಸಬಾರದು. ಸರಳವಾಗಿ ಶುಭಾಶಯ ಕೋರಬೇಕೆಂದು ಎಂದು ಬಿಎಸ್ವೈ ಮನವಿ ಮಾಡಿದ್ದಾರೆ.