ಫೆ.25ರಂದು ಗಾಂಧೀಜಿ ವಿಶೇಷ ಕವರ್ ಬಿಡುಗಡೆ

Update: 2019-02-22 15:30 GMT

ಉಡುಪಿ, ಫೆ. 22: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು 1934ರ ಫೆ.25ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸ್ಮರಣಾರ್ಥ ಇದೇ ಫೆ.25ರ ಸೋಮವಾರ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ಮಹಾತ್ಮ ಗಾಂಧಿ ಅವರ ವಿಶೇಷ ಕವರ್ ಒಂದನ್ನು ಬಿಡುಗಡೆ ಮಾಡಲಾಗುತ್ತದೆ.

ಫೆ.25ರಂದು ಬೆಳಗ್ಗೆ 11:30ಕ್ಕೆ ಮಣಿಪಾಲ ವಿವಿಯ ಕೌನ್ಸಿಲಿಂಗ್ ಹಾಲ್‌ನಲ್ಲಿ ಮಾಹೆ ಹಾಗೂ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಜಂಟಿ ಆಶ್ರಯದಲ್ಲಿ ಸಮಾರಂಭ ನಡೆಯಲಿದ್ದು, ಬೆಂಗಳೂರಿನ ಕರ್ನಾಟಕ ವೃತ್ತದ ಪ್ರಧಾನ ಪೋಸ್ಟ್‌ಮಾಸ್ಟರ್ ಜನರಲ್ ಚಾರ್ಲ್ಸ್ ಲೋಬೊ ಅವರು ಗಾಂಧಿ ಕವರ್‌ನ್ನು ಬಿಡುಗಡೆಗೊಳಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಎಂಇಎಂಜಿ ಅಧ್ಯಕ್ಷ ಹಾಗೂ ಅಕಾಡೆಮಿಯ ರಿಜಿಸ್ಟ್ರಾರ್ ಡಾ.ರಂಜನ್ ಪೈ ವಹಿಸಲಿದ್ದಾರೆ ಎಂದು ಅಕಾಡೆಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News